"ಜಗತ್ತಿನ ನಾಟಕರಂಗದಲ್ಲಿ ವಿಧಿಯ ಬರವಣಿಗೆಯನ್ನು ಮೀರುವವರು ಯಾರು?" ಅಂತ ಧೃಡವಾಗಿ ನಂಬಿರುವವನು ನಾನು! ನನ್ನಿಂದ ಏನೇ ಆದರೂ ಅದು ನಾನು ಮಾಡಿದ್ದಲ್ಲ,ನನ್ನ ಹಣೆಯಲ್ಲಿ ಬರೆದಿದ್ದುದು ಎಂದು ಹೇಳುವವನು ನಾನು.ಪುಂಗಿ ನಾದಕ್ಕೆ ತಲೆದೂಗಿ ನಡೆವ ನಾಗರಹಾವಂತೆ ,ವಿಧಿ ತೋರ್ಸೋ ದಾರಿಯಲ್ಲಿ ತಲೆ ತಗ್ಗಿಸಿ ನಡೆವ... ನಾನು
ಹಣೆಬರಹದ ಮುಂದೆ ಏನು ಮಾಡಕ್ಕಾಗಲ್ಲ,ಹಣೆಲಿ ಏನ್ ಬರೆದಿರೋತ್ತು ಹಾಗೆ ಆಗಲೇ ಬೇಕು ಅದನ್ನ ಬದಲಾಯಿಸಲು ಹರಿ-ಬ್ರಹ್ಮಾದಿಗಳಿಂದಲೂ ಸಾದ್ಯವಿಲ್ಲ ಎಂಬುದು ನನ್ನ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.
ಮನಸ್ಸು ಮಾಡಿದ್ರೆ ಏನು ಮಾಡಕ್ಕಾಗಲ್ಲ ,ಹಣೆಯಲ್ಲಿ ಬರೆದಿರಬೇಕು ಅನ್ನುವಷ್ಟರ ಮಟ್ಟಿಗೆ ನಾನು ತಲುಪಿದ್ದೇನೆ.
ಯಾಕೆಂದರೆ.. ವಿಧಿಗೆ ಸವಾಲ್ ಹಾಕಿ ಕಂಡಿದ್ದು ಬರೀ ಸೋಲಿನ ಸಾಲು........
ನನ್ನೊಂದಿಗೆ:hanebaraha@gmail.com